ಧುಳೆಯ ನಿಮ್ಗುಲ್ ಬಳಿ ಘಟನೆ 35 ಮಂದಿಗೆ ಗಾಯ, ಢಿಕ್ಕಿ ರಭಸಕ್ಕೆ ಬಸ್ ಛಿದ್ರ
ಮುಂಬೈ: ಮಹಾರಾಷ್ಟ್ರದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 15 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಧುಳೆಯ ನಿಮ್ಗುಲ್ ನಲ್ಲಿ ಹೆದ್ದಾರಿಯಲ್ಲಿದ್ದ ಟ್ರಕ್ ಗೆ ಹಿಂದಿನಿದ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಇಡೀ ಬಸ್ ಛಿದ್ರವಾಗಿದೆ. ಅಂತೆಯೇ ಬಸ್ ನಲ್ಲಿ ಪ್ರಯಾಣಿಕರ ಪೈಕಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧುಳೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಬಸ್ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement