ಚಂದ್ರಯಾನ-2 ಯಶಸ್ಸಿನ ರೂವಾರಿ,  ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಕೆ.ಶಿವನ್  ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ  ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಕೆ ಶಿವನ್
ಕೆ ಶಿವನ್

ಚೆನ್ನೈ: ಇಸ್ರೋ ಅಧ್ಯಕ್ಷ ಕೆ.ಶಿವನ್  ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ  ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಇತ್ತೀಚೆಗೆ ಚಂದ್ರಯಾನ--2 ಮಿಷನ್ ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ಇದರ  ನೇತೃತ್ವ ವಹಿಸಿದ್ದ ಕೈಲಸಾವಾಡಿವು ಶಿವನ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ವಿಜ್ಞಾನ ತಂತ್ರಜ್ಞಾನದ ಜಗತ್ತಿನಲ್ಲಿ ಸಂತಸ ತಂದಿದೆ.

ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಶಿವನ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಶಿವನ್ ಅವರು ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚೆನ್ನೈನಲ್ಲಿನ ಸಮಾರಂಬದಲ್ಲಿ ಪ್ರಶಸ್ತಿ ಸ್ವೀಕರಿಸಬೇಕಾಗಿತ್ತು. ಆದರೆ ಕಾರಣಾಂತರದಿಂದ ಅದು ಸಾಧ್ಯವಾಗದ ಕಾರಣ ಇಂದು ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ.

ಪ್ರಶಸ್ತಿ 8 ಗ್ರಾಂ ಚಿನ್ನದ ಪದಕ, ರೂ. ಐದು ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com