ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೊಯಲ್ ದೆಹಲಿ, ಮುಂಬೈ ನಿವಾಸಗಳ ಮೇಲೆ ಇಡಿ ದಾಳಿ

ತೀವ್ರ ಆರ್ಥಿಕ ಸಂಕಷ್ಟ ಹಾಗೂ ಸಾಲದಿಂದಾಗಿ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ದೆಹಲಿ ಹಾಗೂ ಮುಂಬೈ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ
ನರೇಶ್ ಗೋಯಲ್
ನರೇಶ್ ಗೋಯಲ್

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟ ಹಾಗೂ ಸಾಲದಿಂದಾಗಿ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ದೆಹಲಿ ಹಾಗೂ ಮುಂಬೈ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ವಿದೇಶಿ ವಿನಿಯಮ ಕಾನೂನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ನರೇಶ್ ಗೊಯಲ್ ಅವರ ದೆಹಲಿ ಹಾಗೂ ಮುಂಬೈ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಪೋರೇಟ್ ಸಚಿವಾಲಯದ ಮೂಲಗಳ ಪ್ರಕಾರ ನರೇಶ್ ಗೊಯಲ್ ಅವರು ಜೆಟ್ ಏರ್ ವೇಸ್ ಗೆ ಸೇರಿದ ದೊಡ್ಡ ಮೊತ್ತದ ಹಣವನ್ನು ವಿದೇಶಗಳಿಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ.

8 ಸಾವಿರ ಕೋಟಿ ರುಪಾಯಿ ಸಾಲದಲ್ಲಿ ಸಿಲುಕಿದ್ದ ಜೆಟ್ ಏರ್ ವೇಸ್ ಕಳೆದ ಏಪ್ರಿಲ್ 17ರಿಂದ ತನ್ನ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com