ಛತ್ತೀಸ್ ಗಢ: ಭದ್ರತಾ ಪಡೆಗಳಿಂದ ಎನ್ಕೌಂಟರ್, ಐದು ಮಾವೋವಾದಿಗಳ ಹತ್ಯೆ, ಇಬ್ಬರು ಸೈನಿಕರಿಗೆ ಗಾಯ

ನಕ್ಸಲ್ ಪೀಡಿತ ಛತ್ತೀಸ್ ಗಢದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐವರು ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಮಾವೋವಾದಿಗಳ ಎನ್ಕೌಂಟರ್
ಮಾವೋವಾದಿಗಳ ಎನ್ಕೌಂಟರ್

ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳ ವಿರುದ್ಧ ತೀವ್ರ ಗುಂಡಿನ ಚಕಮಕಿ

ರಾಯ್ ಪುರ: ನಕ್ಸಲ್ ಪೀಡಿತ ಛತ್ತೀಸ್ ಗಢದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐವರು ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ನಾರಾಯಣ ಪುರ ಜಿಲ್ಲೆಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಕೂಡಲೇ ಅಲ್ಲಿಗೆ ದೌಡಾಯಿಸಿದ್ದು, ಸೈನಿಕರ ಆಗಮನಗ ವಿಚಾರ ತಿಳಿಯುತ್ತಲೇ ಮಾವೋವಾದಿಗಳು ಗುಂಡಿನ ಸುರಿಮಳೆ ಗರೆದಿದ್ದಾರೆ. ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ನಡೆಸಿದ್ದು, ಸೈನಿಕರ ಗುಂಡೇಟಿಗೆ ಐವರು ಮಾವೋವಾದಿಗಳು ಹತರಾಗಿದ್ದಾರೆ.

ಇನ್ನು ಘಟನೆಯಲ್ಲಿ ಇಬ್ಬರು ಸೈನಿಕರಿಗೂ ಕೂಡ ಗಾಯವಾಗಿದ್ದು, ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಪ್ರದೇಶದಲ್ಲಿ ಗುಂಡಿನ ಚಕಮಕಿ ಚಾಲ್ತಿಯಲ್ಲಿದ್ದು, ಹೆಚ್ಚುವರಿ ಸೈನಿಕರನ್ನು ರವಾನಿಸಲಾಗಿದೆ ಎಂದು ಹೇಳಲಾಗಿದೆ. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com