ಮಹಾರಾಷ್ಟ್ರ ಕಟ್ಟಡ ಕುಸಿತ: ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ.
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಬಿವಾಂದಿ: ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅವಶೇಷಗಳಡಿ ಸಿಲುಕಿದ ಮೂವರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿದೆ.

ಇನ್ನೂ 15 ಮಂದಿ ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com