ನವದೆಹಲಿ: ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ಅನ್ನು ರದ್ಜು ಪಡಿಸಿ ಕಾಶ್ಮೀರಿಗರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರದ ಮೋದಿ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈ ಕುರಿತಂತೆ ಖಾಸಗಿ ಮಾಧ್ಯಮ ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಸಂಪುಟ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ವಿಚಾರವಾಗಿ ನಡೆಯುವ ಈ ಸಭೆಯ ನಂತರ ದೊಡ್ಡ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಮೋದಿ ಸರ್ಕಾರ ದೊಡ್ಡ ಪ್ಯಾಕೇಜ್ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸುವ ಕ್ರಮಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ವರದಿಯಲ್ಲಿ ಹೇಳಲಾಗಿದೆ.
ಇನ್ನು ಸಚಿವ ಸಂಪುಟ ಸಭೆಗೂ ಮುನ್ನ ಇಂದು 2019 ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ ಕುರಿತು ಚರ್ಚಿಸಲು ಗೃಹ ಸಚಿವಾಲಯದ ಸಚಿವರ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹೊಸದಾಗಿ ನೇಮಕಗೊಂಡ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ವಹಿಸಿದ್ದರು. ಮಧ್ಯಾಹ್ನ ನಂತರ ಪ್ರಾರಂಭವಾದ ಸಭೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಕೂಡ ಭಾಗವಹಿಸಿದ್ದರು.
ಎಲ್ಒಸಿಯಲ್ಲಿ ಪಾಕಿಸ್ತಾನದ 100 ಕ್ಕೂ ಹೆಚ್ಚು ವಿಶೇಷ ಕಮಾಂಡೋಗಳ ನಿಯೋಜನೆ!
ಇಮ್ರಾನ್ ಖಾನ್ ಮಹಾನ್ ಎಡವಟ್ಟಿಗೆ ಆನಂದ್ ಮಹೀಂದ್ರ 'ಮಂಗ'ಳಾರತಿ'!
ಕಾಶ್ಮೀರದಲ್ಲಿ ಸಂಪರ್ಕ ಸೇವೆಗಳಿಗೆ ನಿರ್ಬಂಧ; ನಾಗರಿಕರಿಗೆ ಸಿಗುತ್ತಿಲ್ಲ ಆಪ್ತರ ಸಾವಿನ ಸುದ್ದಿ!
ಕಣಿವೆ ರಾಜ್ಯ ಪ್ರಕ್ಷುಬ್ಧ: ಪರಿಸ್ಥಿತಿ ನಿಯಂತ್ರಣಕ್ಕೆ ಕಾಶ್ಮೀರ ಮಾಜಿ ಸಿಎಂಗಳ ಮೊರೆ ಹೋದ ಗೃಹ ಸಚಿವಾಲಯ
Advertisement