ಅಧಿಕಾರಕ್ಕೇರಲು ಜನರಲ್ಲಿ ಭೀತಿ ಮೂಡಿಸುತ್ತಿವೆ; ಕಾಂಗ್ರೆಸ್, ಜೆಎಂಎಂ ವಿರುದ್ಧ ಮೋದಿ ಕಿಡಿ

"ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ಕಾಂಗ್ರೆಸ್ ಹಾಗೂ ಖಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವನ್ನು ಲೂಟಿ ಮಾಡುವುದೊಂದೇ ಅವರ ಉದ್ದೇಶವಾಗಿದೆ"
ಅಧಿಕಾರಕ್ಕೇರಲು ಜನರಲ್ಲಿ ಭೀತಿ ಮೂಡಿಸುತ್ತಿವೆ; ಕಾಂಗ್ರೆಸ್, ಜೆಎಂಎಂ ವಿರುದ್ಧ ಮೋದಿ ಕಿಡಿ
ಅಧಿಕಾರಕ್ಕೇರಲು ಜನರಲ್ಲಿ ಭೀತಿ ಮೂಡಿಸುತ್ತಿವೆ; ಕಾಂಗ್ರೆಸ್, ಜೆಎಂಎಂ ವಿರುದ್ಧ ಮೋದಿ ಕಿಡಿ

ಜಾರ್ಖಂಡ್: ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ಕಾಂಗ್ರೆಸ್ ಹಾಗೂ ಖಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವನ್ನು ಲೂಟಿ ಮಾಡುವುದೊಂದೇ ಅವರ ಉದ್ದೇಶವಾಗಿದ್ದು, ಅದಕ್ಕಾಗಿ ರಾಜ್ಯದಲ್ಲಿ ಅಧಿಕಾರಕ್ಕೇರಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದರು. 

ಇಲ್ಲಿನ ಬಿರ್ಸಾ ಕಾಲೇಜು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಹಾಗೂ ಜೆಎಂಎಂ ನ ಇತಿಹಾಸ ಹಾಗೂ ಕೃತ್ಯಗಳನ್ನು ಅರಿತಿರುವ ಜನರು ಆ ಪಕ್ಷಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಎರಡೂ ಪಕ್ಷಗಳು ರಾಜ್ಯದ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿವೆ. ಅವರಿಗೆ ಕೈಗಾರಿಕೋದ್ಯಮ ಮತ್ತು ಅಭಿವೃದ್ಧಿ ಬೇಕಿಲ್ಲ. ಏಕೆಂದರೆ ಜನರ ಕೈಯಲ್ಲಿ ಹಣ ಓಡಾಡಲಾರಂಭಿಸಿದರೆ ಅವರನ್ನು ಪರಿಗಣಿಸುವುದಿಲ್ಲ ಎಂಬ ಸತ್ಯ ವಿಪಕ್ಷಗಳಿಗೆ ತಿಳಿದಿದೆ ಎಂದು ಲೇವಡಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com