ಸಂಸತ್ತಿನಲ್ಲಿ ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಪಿ ಚಿದಂಬರಂ 

ತಿಹಾರ್ ಜೈಲಿನಲ್ಲಿ 106 ದಿನಗಳನ್ನು ಕಳೆದ ಬಳಿಕ ಹೊರಬಂದಿರುವ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಗುರುವಾರ ಸಂಸತ್ತಿಗೆ ಆಗಮಿಸಿದರು. ಸದನದಲ್ಲಿ ತಮ್ಮ ಧ್ವನಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಸಂಸದರೊಂದಿಗೆ ಪ್ರತಿಭಟನೆಯಲ್ಲಿ ಸೇರಿಕೊಂಡ ಪಿ ಚಿದಂಬರಂ
ಕಾಂಗ್ರೆಸ್ ಸಂಸದರೊಂದಿಗೆ ಪ್ರತಿಭಟನೆಯಲ್ಲಿ ಸೇರಿಕೊಂಡ ಪಿ ಚಿದಂಬರಂ

ನವದೆಹಲಿ: ತಿಹಾರ್ ಜೈಲಿನಲ್ಲಿ 106 ದಿನಗಳನ್ನು ಕಳೆದ ಬಳಿಕ ಹೊರಬಂದಿರುವ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಗುರುವಾರ ಸಂಸತ್ತಿಗೆ ಆಗಮಿಸಿದರು. ಸದನದಲ್ಲಿ ತಮ್ಮ ಧ್ವನಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.


ಸಂಸತ್ತು ಆವರಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಚಿದಂಬರಂ, ಈರುಳ್ಳಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದರೊಂದಿಗೆ ಜೊತೆಯಾದರು.

ಇಂದು ಅಪರಾಹ್ನ ಮಾಧ್ಯಮವನ್ನುದ್ದೇಶಿಸಿ ಮಾತನಾಡುವುದಾಗಿ ಹೇಳಿದರು.


ಜೈಲಿನಿಂದ ಹಿಂತಿರುಗಿ ಬಂದದ್ದಕ್ಕೆ ಸಂತೋಷವಿದೆ. ಸಂಸತ್ತಿನಲ್ಲಿ ಸರ್ಕಾರಕ್ಕೆ ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com