ನಿತ್ಯಾನಂದನ 'ಪಾಸ್ ಪೋರ್ಟ್' ರದ್ದು- ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಸ್ವಯಂ  ಘೋಷಿತ ದೇವ ಮಾನವ ನಿತ್ಯಾನಂದನ ಪಾಸ್ ಪೋರ್ಟನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.
ನಿತ್ಯಾನಂದ
ನಿತ್ಯಾನಂದ

ನವದೆಹಲಿ: ಇತ್ತೀಚಿಗೆ ಅತ್ಯಾಚಾರ ಆರೋಪದಲ್ಲಿ ಸಿಲುಕಿ, ದೇಶ ತೊರೆದಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪಾಸ್ ಪೋರ್ಟನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. 

 ಹೊಸದಾಗಿ ಪಾಸ್ ಪೋರ್ಟ್ ಪಡೆಯಲು ಆತ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ತಿಳಿಸಿದೆ. 

ನಿತ್ಯಾನಂದ ವಿದೇಶದಲ್ಲಿ ಹೊಂದಿರುವ ಎಲ್ಲಾ ಕಾರ್ಯ ಚಟುವಟಿಕೆಗಳ ಬಗ್ಗೆ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ. 

ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದುಪಡಿಸಿರುವುದರಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ  ನಿತ್ಯಾನಂದನಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com