ಹೈದರಾಬಾದ್: ನರರಾಕ್ಷಸರನ್ನು ಬೇಟೆಯಾಡಿದ್ದು ಕರ್ನಾಟಕದ ಸಿಂಗಂ!

ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ. 
ವಿಶ್ವನಾಥ್ ಸಜ್ಜನರ್
ವಿಶ್ವನಾಥ್ ಸಜ್ಜನರ್

ಹೈದರಾಬಾದ್: ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ. 

ಶುಕ್ರವಾರ ಬೆಳಗಿನ ಜಾವ ಸ್ಥಳ ಪರಿಶೀಲನೆಗೆಂದು ಆರೋಪಿಗಳನ್ನು ಕರೆದೊಯ್ಯಲಾಗಿತ್ತು,  ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದ್ದರು, ಹೀಗಾಗಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳಿಗೆ ಗುಂಡು ಹಾರಿಸಿದ್ದಾರೆ.

ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್  ಈ ತಂಡದ ನೇತೃತ್ವ ವಹಿಸಿದ್ದರು. ವಿಶ್ವನಾಥ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ದರಾಗಿರುವ ವಿಶ್ವನಾಥ್ ಈ ಹಿಂದೆ ಹಲವು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com