ಉತ್ತರ ಪ್ರದೇಶ ದೇಶದ 'ಅತ್ಯಾಚಾರ ರಾಜಧಾನಿ'- ಕಾಂಗ್ರೆಸ್

ಉತ್ತರ ಪ್ರದೇಶ ದೇಶದ ಅತ್ಯಾಚಾರದ ರಾಜಧಾನಿಯಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ , ಉನ್ನಾವೋ ಪ್ರಕರಣದ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಉನ್ನಾವೋ ಸಂತ್ರಸ್ತೆ ಮೃತದೇಹ
ಉನ್ನಾವೋ ಸಂತ್ರಸ್ತೆ ಮೃತದೇಹ

ನವ ದೆಹಲಿ: ಉತ್ತರ ಪ್ರದೇಶ ದೇಶದ ಅತ್ಯಾಚಾರದ ರಾಜಧಾನಿಯಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ , ಉನ್ನಾವೋ ಪ್ರಕರಣದ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದಿದ್ದು, ಉನ್ನಾವೋ ಸಂತ್ರಸ್ತೆ ಸಾವಿಗೆ ಸಂಬಂಧಿಸಿದ ಜವಾಬ್ದಾರಿಯನ್ನು ಅಲ್ಲಿನ ಸರ್ಕಾರವೇ ತೆಗೆದುಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ ಆಗ್ರಹಿಸಿದ್ದಾರೆ.

ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಉತ್ತರ ಪ್ರದೇಶ ದೇಶದ ಅತ್ಯಾಚಾರದ ರಾಜಧಾನಿಯಾಗುತ್ತಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com