ನವ ದೆಹಲಿ: ನವ ದೆಹಲಿ ರೈಲು ನಿಲ್ದಾಣದ ಅಜ್ಮೀರ್ ಗೇಟ್ ಬಳಿ ಮಹಿಳೆಯೊಬ್ಬರ ಮೇಲೆ ಆಕೆಯ ಪ್ರಿಯಕರನೇ ಕೆಲ ರಾಸಾಯನಿಕದಿಂದ ದಾಳಿ ನಡೆಸಿರುವ ಘಟನೆ ಇಂದು ನಡೆದಿದೆ. ಆತ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ತೆಲಂಗಾಣದಿಂದ ದೆಹಲಿಗೆ ಬಂದು ವಾಗಾಬಾಂದ್ ವಿನಲ್ಲಿ ಕಳೆದ ಆರು ತಿಂಗಳಿನಿಂದ ವಾಸಿಸುತ್ತಿದ್ದಳು ಎಂದು ರೈಲ್ವೆ ಡಿಸಿಪಿ ಹರೇಂದರ್ ಸಿಂಗ್ ಹೇಳಿದ್ದಾರೆ.
ವಾಗಾಬಾಂದ್ ನಲ್ಲಿ ಪಶ್ಚಿಮ ಬಂಗಾಳದಿಂದ ಬಂದಿದ್ದ ವ್ಯಕ್ತಿಯೊಬ್ಬರ ವಾಸಿಸುತ್ತಿದ್ದಳು ಎನ್ನಲಾಗಿದ್ದು, ಆತ ಆಕೆಯನ್ನು ಪಶ್ಚಿಮ ಬಂಗಾಳಕ್ಕೆ ಕರೆದುಕೊಂಡು ಹೋಗಲು ಒತ್ತಡ ಹೇರಿದ್ದಾನೆ. ಆದರೆ, ಅದಕ್ಕೆ ಒಪ್ಪದಿದ್ದಾಗ ಇಬ್ಬರ ನಡುವೆ ವಾಗ್ವಾದ ನಡೆದು ಕೆಲ ರಾಸಾಯನಿಕವನ್ನು ಆಕೆಯ ಮೇಲೆ ಎರಚಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ಥೆಯನ್ನು ಎಲ್ ಎನ್ ಜೆಪಿ ಆಸ್ಪತ್ರೆಗೆ ನಂತರ ಗುರುನಾನಕ್ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Advertisement