ನವದೆಹಲಿ; ಭಾರತ ವಿಶ್ವದ ರೇಪ್ ನ ರಾಜಧಾನಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಲೋಕಸಭೆಯಲ್ಲಿ ಶುಕ್ರವಾರ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಮುಂದುವರಿಸಲು ಸಾಧ್ಯವಾಗದೆ ಅರ್ಧ ಗಂಟೆಗಳ ಕಾಲ ಕಲಾಪವನ್ನು ಮುಂದೂಡಲಾಯಿತು.
ರಾಹುಲ್ ಗಾಂಧಿ ತಮ್ಮ ಹೇಳಿಕೆಯಿಂದ ದೇಶದ ಮಹಿಳೆಯರನ್ನು ಅವಮಾನಿಸಿದ್ದು ಅವರಿಗೆ ನಾಚಿಕೆ ತರುವ ವಿಷಯವಾಗಿದೆ. ಹೀಗಾಗಿ ಅವರು ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಸಚಿವರು ಸೇರಿದಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಆಡಳಿತಾರೂಢ ಬಿಜೆಪಿ ಸದಸ್ಯರು ಸದನದ ಪಡಸಾಲೆಯಲ್ಲಿ ತೀವ್ರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸದಸ್ಯರು ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಕಲಾಪವನ್ನು ಮುಂದೂಡಲು ಸಾಧ್ಯವಾಗದೆ ಸ್ಪೀಕರ್ ಓಂ ಬಿರ್ಲಾ ಅರ್ಧ ಗಂಟೆಗಳ ಕಾಲ ಮುಂದೂಡಿದರು.
Advertisement