ಬಡ ಕುಟುಂಬ ದಿನಕ್ಕೆ 20 ಸಿಲಿಂಡರ್ ಬಳಕೆ ಮಾಡಲು ಹೇಗೆ ಸಾಧ್ಯ?: ಸಿಎಜಿ ಆಘಾತಕಾರಿ ವರದಿ

ಬಡ ಕುಟುಂಬವೊಂದು ದಿನಕ್ಕೆ 20 ಗ್ಯಾಸ್ ಸಿಲಿಂಡರ್ ಅನ್ನು ಬಳಕೆ ಮಾಡಲು ಹೇಗೆ ಸಾಧ್ಯ ಎಂಬ ಗಂಭೀರ ಪ್ರಶ್ನೆಯನ್ನು ಸಿಎಜಿ (ಕಂಟ್ರೋಲರ್​ ಆ್ಯಂಡ್​ ಆಡಿಟರ್​ ಜನರಲ್ ಆಫ್​ ಇಂಡಿಯಾ​) ವರದಿ ಎತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಬಡ ಕುಟುಂಬವೊಂದು ದಿನಕ್ಕೆ 20 ಗ್ಯಾಸ್ ಸಿಲಿಂಡರ್ ಅನ್ನು ಬಳಕೆ ಮಾಡಲು ಹೇಗೆ ಸಾಧ್ಯ ಎಂಬ ಗಂಭೀರ ಪ್ರಶ್ನೆಯನ್ನು ಸಿಎಜಿ (ಕಂಟ್ರೋಲರ್​ ಆ್ಯಂಡ್​ ಆಡಿಟರ್​ ಜನರಲ್ ಆಫ್​ ಇಂಡಿಯಾ​) ವರದಿ ಎತ್ತಿದೆ.

ಹೌದು.. ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಬಡವರಿಗೆ ಅಡುಗೆ ಅನಿಲ ನೀಡುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ದುರ್ಬಳಕೆ ಆಗುತ್ತಿರುವುದಾಗಿ ಸಿಎಜಿ (ಕಂಟ್ರೋಲರ್​ ಆ್ಯಂಡ್​ ಆಡಿಟರ್​ ಜನರಲ್ ಆಫ್​ ಇಂಡಿಯಾ​) ವರದಿ ಮಾಡಿದೆ. ವರದಿಯಲ್ಲಿರುವಂತೆ ದಿನವೊಂದರಲ್ಲಿ ಒಬ್ಬರೇ ಫಲಾನುಭವಿ ಹಲವು ಬಾರಿ ರೀಫಿಲ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದ್ದು,  2 ರಿಂದ 20 ಎಲ್​ಪಿಜಿ ಸಿಲಿಂಡರ್​ ಅನ್ನು ಒಂದು ದಿನದಲ್ಲಿ ಒಬ್ಬರೇ ಫಲಾನುಭವಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ವಿತರಿಸಲಾಗಿರುವ 3.44 ಲಕ್ಷ ಪ್ರಕರಣಗಳು ಕಂಡುಬಂದಿದೆ.

ಇದೇ ಕಾರಣಕ್ಕೆ ಗೃಹ ಬಳಕೆಯ ಅಂದರೆ ದೈನಂದಿನ ಹೆಚ್ಚಿನ ಬಳಕೆಯು ಸಾಮಾನ್ಯ ಗ್ರಾಹಕರಲ್ಲಿ ಸಾಧ್ಯವಿಲ್ಲದಿರುವುದರಿಂದ ಗೃಹ ಬಳಕೆಗಾಗಿ ನೀಡಲಾಗಿರುವ ಎಲ್​ಪಿಜಿ ಸಂಪರ್ಕವು ವಾಣಿಜ್ಯಕ್ಕೆ ಬಳಕೆಯಾಗಿದೆ ಎಂದು ಸಿಎಜಿ ಸಂಶಯ ವ್ಯಕ್ತಪಡಿಸಿದೆ. ವಾಣಿಜ್ಯ ಎಲ್​ಪಿಜಿ ರೀಫಿಲ್​ ದರ ಅತ್ಯಧಿಕ ತೆರಿಗೆಯಿಂದ ಹೊರೆಯಾಗಿರುವ ಕಾರಣ ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಗಳನ್ನೇ ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಎಲ್​ಪಿಜಿ ಸಂಪರ್ಕವನ್ನು ಒದಗಿಸುವ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2016ರ ಮೇ ತಿಂಗಳಿನಲ್ಲಿ ಉದ್ಘಾಟನೆ ಮಾಡಲಾಯಿತು. ಹೊಗೆ ಮತ್ತು ಶುಚಿಯಲ್ಲದ ಇಂಧನದಿಂದ ಬಡವರನ್ನು ರಕ್ಷಿಸುವ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಯಿತು. 2020ರ ಗಡುವಿಗೂ ಏಳು ತಿಂಗಳು ಮುಂಚೆಯೇ 8 ಕೋಟಿ ಜನರಿಗೆ ಹೊಸ ಎಲ್​ಪಿಜಿ ಸಂಪರ್ಕ ಕೊಡಿಸುವ ಮೂಲಕ ಯೋಜನೆ ಯಶಸ್ಸು ಸಾಧಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com