ನವದೆಹಲಿ: ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆಯಾಗಬೇಕು ಮತ್ತು ಸಾಮಾನ್ಯ ಜನರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥ ಸ್ವಾತಿ ಮಾಲಿವಾಲ್ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ 13 ನೇ ದಿನಕ್ಕೆ ಕಾಲಿಟ್ಟಿದ್ದು ಅವರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಅವರು ಖಾಸಗಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ .
ಇಂದು ಬೆಳಗ್ಗೆ ರಾಜ ಘಾಟ್ನಲ್ಲಿ ಅವರು ಪ್ರಜ್ಞಾಶೂನ್ಯರಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement