ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭುಗಿಲೆದ್ದಿದ್ದ ಪ್ರತಿಭಟನೆ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿ ಅಂತರ್ಜಾಲ ಸೇವೆಗಳನ್ನು ಪುನಃ ಆರಂಭ ಮಾಡಲಾಗಿದೆ.
ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದ್ದರಿಂದ ಡಿ.11 ರಂದು ಅಸ್ಸಾಂ ನಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇನ್ನು ರಾಷ್ಟ್ರ ರಾಜಧಾನಿಯಲ್ಲೂ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದ ಪರಿಣಾಮ ಕೆಲವು ಮೆಟ್ರೋ ನಿಲ್ದಾಣಗಳಲ್ಲಿ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಡಿ.20 ರಂದು ಮೆಟ್ರೋ ಸೇವೆಗಳು ಎಲ್ಲಾ ನಿಲ್ದಾಣಗಳಲ್ಲಿಯೂ ಕಾರ್ಯಾರಂಭ ಮಾಡಿವೆ.
Advertisement