ಹಳೆ ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಭೀಮ್ ಆರ್ಮಿ
ಭೀಮ್ ಆರ್ಮಿ

ನವದೆಹಲಿ: ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಜಾದ್ ಸಂಘಟನೆ ಶುಕ್ರವಾರ ಜಾಮಾ ಮಸೀದಿಯಿಂದ ಜಂತರ್ ಮಂತರ್ ವರೆಗೆ  ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿತ್ತು.

ನಿನ್ನೆ ತಡ ರಾತ್ರಿ ದೆಹಲಿಯ ದರಿಯಾಗಂಜ್ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅನುಮತಿ ಇಲ್ಲದೆ ಹಲವು ಮಂದಿ ಪ್ರತಿಭಟನೆ ನಡೆಸಿದ್ದರು. ಈ ಸಮಯದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಈ ವೇಳೆ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಬಂಧನಕ್ಕೊಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com