ರೈತರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ: ಮಹಾ ಸಿಎಂ ಉದ್ಧವ್ ಠಾಕ್ರೆ ಘೋಷಣೆ

ರೈತರ ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಶನಿವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ನಾಗಪುರ್: ರೈತರ ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಶನಿವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಚಳಿಗಾಲ ಅಧಿವೇಶನದ ಕೊನೆಯದಿನವಾದ ಇಂದು ವಿಧಾಸಭೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರ ಸಾಲ ಮನ್ನಾ ಘೋಷಿಸಿದ್ದು, ಸೆಪ್ಟೆಂಬರ್ 30, 2019ರ ವರೆಗೆ ರೈತರು ಪಡೆದ ಎರಡು ಲಕ್ಷ ರೂಪಾಯಿ ಕೃಷಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ.

ಮಹಾತ್ಮ ಜ್ಯೋತಿರಾವ್ ಫುಲೆ ಸಾಲ ಮನ್ನಾ ಯೋಜನೆ ಅಡಿ ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಅಲ್ಲದೆ ಕಾಲ ಕಾಲಕ್ಕೆ ಸಾಲ ಮರುಪಾವತಿ ಮಾಡಿದ ರೈತರಿಗೆ ವಿಶೇಷ ಯೋಜನೆಗಳನ್ನು ಘೋಷಿಸುವುದಾಗಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಆರೋಪಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com