ನವದೆಹಲಿ: ದೇಶದ ಜನರು ತಮ್ಮ ಕ್ರಿಯೆಗಳಲ್ಲಿ ಮುಂದಿರಿಸಿಕೊಂಡು ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿಕೊಂಡು ಹಿಂಸಾಚಾರದಿಂದ ದೂರವುಳಿಯಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ದು ಕರೆ ನೀಡಿದ್ದಾರೆ.
ಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದ ಮೂಲ ಗುಣವಾಗಿದ್ದು, ಜನರು ಸಂವಿಧಾದನ ನಿಯಮಗಳ ಅನುಸಾರ ಶಾಂತಿಯುತ, ಪ್ರಜಾಪ್ರಭುತ್ವ ವಿಧಾನದಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಪೌರತ್ವ ಕಾಯ್ದೆ ವಿರೋಧಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಅಲ್ಲದೆ ಹಲವೆಡೆ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಶಾಂತಿ ಕಾಪಾಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ.
Advertisement