ನವದೆಹಲಿ: ಪೇಜಾವರ ಮಠದ ಹಿರಿಯ ಯತಿಶ್ರೀ ವಿಶ್ವೇಶರತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಪೇಜಾವರ ಶ್ರೀಗಳು ಮಾರ್ಗದರ್ಶಿ ಬೆಳಕಾಗಿ ಲಕ್ಷಾಂತರ ಜನರ ಮನದಲ್ಲಿ ಹಾಗೂ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಓಂ ಶಾಂತಿ ಎಂದು ಹೇಳುವ ಮೂಲಕ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ಸಂತಾಪ
ಇನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸುರೇಶ್ ಅಂಗಡಿ ಸಹ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Advertisement