ದೆಹಲಿಯಲ್ಲಿ ಮಟ್ಟ ಮಂಜು: ರಸ್ತೆ ಕಾಣದೆ ಕಣಿವೆಗೆ ಉರುಳಿ ಬಿದ್ದ ಕಾರು- 6 ಮಂದಿ ದುರ್ಮರಣ

ರಾಜಧಾನಿ ದೆಹಲಿಯಲ್ಲಿ ಮಂಜು ಆವರಿಸಿದ್ದು, ಮಂಜು ಕವಿತ ವಾತಾವರಣ ಹಿನ್ನೆಲೆಯಲ್ಲಿ ರಸ್ತೆ ಕಾಣದ ಕಾರಣ ಚಲಿಸುತ್ತಿದ್ದ ಕಾರೊಂದು ಕಣಿವೆಗೆ ಉರುಳಿ ಬಿದ್ದು, 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮಂಜು ಆವರಿಸಿದ್ದು, ಮಂಜು ಕವಿತ ವಾತಾವರಣ ಹಿನ್ನೆಲೆಯಲ್ಲಿ ರಸ್ತೆ ಕಾಣದ ಕಾರಣ ಚಲಿಸುತ್ತಿದ್ದ ಕಾರೊಂದು ಕಣಿವೆಗೆ ಉರುಳಿ ಬಿದ್ದು, 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ. 

ದೆಹಲಿ ಹೊರವಲಯದ ಗ್ರೇಟರ್ ನೋಯ್ಡಾದಲ್ಲಿ ದುರ್ಘಟನೆ ತಡರಾತ್ರಿ ಸಂಭವಿಸಿದೆ. ಕಾರಿನಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. 

ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ 5 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಂಜು ಕವಿದ ವಾತಾವರ ಹಿನ್ನಲೆಯಲ್ಲಿ 30 ರೈಲುಗಳ ಸಂಚಾರ ವ್ಯತ್ಯಯವಾಗಿದ್ದು,3 ವಿಮಾನಗಳ ಮಾರ್ಗಗಳನ್ನು ಬದಲಿಸಲಾಗಿದೆ.ವಿಚಾರಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ಎರಡು ದಿನಗಳ ವರೆಗೂ ಉತ್ತರ ಭಾರತದಲ್ಲಿ ಚಳಿ ಹೀಗೆಯೇ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com