ನವದೆಹಲಿ: ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕಾರಣ ಪ್ರವೇಶವನ್ನು ಗುರಿಯಾಗಿಸಿಕೊಂಡ ಅಪ ಪ್ರಚಾರ ನಡೆಸಿದವರ ವಿರುದ್ಧ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಷ್ಮಿತಾ ದೇವ್ ತಿಳಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಉತ್ತರ ಪ್ರದೇಶ ಪೂರ್ವದ ಉಸ್ತುವಾರಿ ವಹಿಸಿದ ನಂತರ ಪ್ರಿಯಾಂಕಾ ಅವರನ್ನು ಗುರಿಯಾಗಿರಿಸಿಕೊಂಡು ಬಿಜೆಪಿ ನಾಯಕರು ಅನೇಕ ರೀತಿಯ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
Advertisement