ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿರುವ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16 ರವರೆಗೂ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಫೆಬ್ರವರಿ 6 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ , ರಾಬರ್ಟ್ ವಾದ್ರಾ ಅವರಿಗೆ ಆದೇಶಿಸಿದ್ದಾರೆ.
ಲಂಡನ್ ನ ಬ್ರೈಯಾನ್ ಸ್ಟಾನ್ ಸ್ಕ್ವೇರ್ ನಲ್ಲಿ ಸುಮಾರು 1.9 ಮಿಲಿಯನ್ ಪೌಂಡ್ ವೆಚ್ಚದಲ್ಲಿ ಆಸ್ತಿ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ರಾಬರ್ಟ್ ವಾದ್ರಾ ವಿರುದ್ಧ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಾವಾ ಆಗಿರುವ ರಾಬರ್ಟ್ ವಾದ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ.
Advertisement