ಇನ್ನು ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತ ಸಂಬಂಧ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಅವಶೇಷಗಳಡಿಯಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಆರ್ ಪಿಒ ರಾಜೇಶ್ ಕುಮಾರ್ ಅವರು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಜಖಂಗೊಂಡಿರುವ 9 ಬೋಗಿಗಳನ್ನು ತೆರವುಗೊಳಿಸಲಾಗುತ್ತಿದೆ. ಅಂತೆಯೇ ಅಪಾಯದಿಂದ ಪಾರಾಗಿರುವ 12 ಕೋಚ್ ಗಳನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ. ಹಾಜಿಪುರ ರೈಲು ನಿಲ್ದಾಣಕ್ಕೆ ಈ ಕೋಚ್ ಗಳನ್ನು ಕೊಂಡೊಯ್ಯಲಾಗುತ್ತದೆ. ಜಖಂಗೊಂಡಿರುವ ಬೋಗಿಳನ್ನು ಬರೌನಿ ರೈಲು ನಿಲ್ದಾಣಕ್ಕೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.