ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಪೋಲಾ ಭಾಸ್ಕರ್ ಸಹಾಯಕ ಮುಖ್ಯ ವಿಜಿಲೆನ್ಸ್ ಮತ್ತು ಭದ್ರತಾ ಅಧಿಕಾರಿಯ ಬಳಿ ಘಟನೆಗೆ ಸಂಬಂಧಿಸಿದಂತೆ ವರದಿ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎಕೆ ಸಿಂಘಾಲ್, ಅಧ್ಯಕ್ಷ ಪಿ ಸುಧಾಕರ್ ಯಾದವ್ ಅವರು ಘಟನೆ ಬಗ್ಗೆ ವಿವರಣೆ ಪಡೆದಿದ್ದು, ಟಿಟಿಡಿ ಮುಖ್ಯಸ್ಥರು ದೇವಸ್ಥಾನಕ್ಕೆ ರಾತ್ರಿಯೇ ದೌಡಾಯಿಸಿ ಮಾಹಿತಿ ಕಲೆ ಹಾಕಿ, ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲನೆ ನಡೆಸಿದ್ದಾರೆ.