ಕೊಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು 40 ಸಿಬಿಐ ಅಧಿಕಾರಿಗಳ ತಂಡ ನಿನ್ನೆ ಸಂಜೆ ತೆರಳಿತ್ತು. ಈ ವೇಳೆ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಅವರ ಮನೆಯ ಮುಂದೆ ಸಿಬಿಐ ಅಧಿಕಾರಿಗಳನ್ನು ತಡೆಯಲಾಗಿದೆ. ಬಳಿಕ, ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲವು ಸಿಬಿಐ ಅಧಿಕಾರಿಗಳನ್ನೇ ಬಂಧಿಸಲಾಗಿತ್ತು. ಇದೀಗ, ಬಂಧಿಸಲ್ಪಟ್ಟಿದ್ದ ಸಿಬಿಐ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದ್ದು, ಮಮತಾ ಬ್ಯಾನರ್ಜಿ ಕೊಲ್ಕತಾ ಮೆಟ್ರೋ ಚಾನೆಲ್ ಬಳಿ ಧರಣಿ ನಡೆಸುತ್ತಿದ್ದಾರೆ.