ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಈಗಷ್ಟೇ ಮಮತಾ ದೀದಿ ಜೊತೆಗೆ ಮಾತನಾಡಿದ್ದೇನೆ. ಮೋದಿ ಮತ್ತು ಅಮಿತ್ ಷಾ ಇಬ್ಬರ ನಡವಳಿಕೆಯೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ದೀದಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದು, ಪಶ್ಚಿಮ ಬಂಗಾಳದಲ್ಲಿ, ಕೇಂದ್ರ ಸರ್ಕಾರದ ನಡೆ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯ ಅಣಕ ಮಾಡುವಂತಿದೆ. ಸಿಆರ್ ಪಿಎಫ್ ತುಕಡಿಯನ್ನು ನೇಮಕ ಮಾಡಿ, ಸರ್ಚ್ ವಾರೆಂಟ್ ಇಲ್ಲದೆ ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗುವುದು ಎಂದರೆ ಕೇಂದ್ರ ಸರ್ಕಾರದ ಪ್ರಕಾರ ಕಾನೂನು ಬದ್ಧವೇ? ಎಂದು ಟ್ವೀಟ್ ಮಾಡಿದೆ.