ಇಂದು ಬೆಳಗ್ಗೆ ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತ ಟ್ವೀಟ್ ಮಾಡಿದ್ದು, 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಹುಶಃ ಮರೆಯುವ ಸಮಸ್ಯೆ ಇರಬೇಕು ಎಂದೆನಿಸುತ್ತದೆ. ಅವರು ಈ ಹಿಂದೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗ ಅಲ್ಲಿ ತಾವೇ ಆಡಿದ್ದ ಮಾತುಗಳನ್ನು ಮರೆತಿದ್ದಾರೆ ಎಂದೆನಿಸುತ್ತಿದೆ. ರಾಹುಲ್ ಗಾಂಧಿ ಅವರೇ ಶೀಘ್ರ ಚೇತರಿಸಿಕೊಂಡು ಗುಣಮುಖರಾಗಿ ಬನ್ನಿ ಎಂದು ಬಿಜೆಪಿ ರಾಹುಲ್ ಗಾಂಧಿ ಕಾಲೆಳೆದಿದೆ.