ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ವಿರುದ್ಧದ ಪ್ರಕರಣವನ್ನು ದೆಹಲಿ ಕೋರ್ಟ್ ಸೋಮವಾರ ಸೆಷನ್ಸ್ ಕೋರ್ಟ್ ವರ್ಗಾವಣೆ ಮಾಡಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರ ಕೋರ್ಟ್ ಈ ಪ್ರಕರಣವನ್ನು ಇಂದು ಸೆಷನ್ಸ್ ಕೋರ್ಟಿಗೆ ವರ್ಗಾಯಿಸಿದ್ದು, ಸೆಷನ್ಸ್ ಕೋರ್ಟ್ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 21ರಂದು ಕೈಗೆತ್ತಿಕೊಳ್ಳಲಿದೆ.
ಇದೇ ವೇಳೆ ಸೆಷನ್ಸ್ ಕೋರ್ಟ್ ಜಾಗೃತ ವರದಿಯನ್ನು ಕಾಪಿಡುವಂತೆ ಪೊಲೀಸರಿಗೆ ಸೂಚಿಸಿದೆ.
ಇನ್ನು ಈ ಪ್ರಕರಣದ ವಿಚಾರಣೆಯಲ್ಲಿ ಕೋರ್ಟಿಗೆ ನೆರವಾಗುವುದಕ್ಕೆ ತನಗೆ ಅನುಮತಿ ನೀಡಬೇಕೆಂದು ಕೋರಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.