ಇನ್ನು ಇಂದಿನಿಂದ ಪಶ್ಚಿಮ ಬಂಗಾಳದ ಕಲಾಪ ಆರಂಭವಾಗಲಿದ್ದು, ಧರಣಿಯ ಸ್ಥಳದಲ್ಲೇ ಅಧಿವೇಶನ ನಡೆಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಳ್ವಿಕೆಯಲ್ಲಿ ದೇಶದ ಸ್ಥಿತಿ ತುರ್ತುಸ್ಥಿತಿ ಸಂದರ್ಭಕ್ಕಿಂತ ಕಡೆಯಾಗಿದೆ ಎಂದು ಕೇಂದ್ರ ಸರ್ಕಾರದ ಮೇಲೆ ಮಮತಾ ವಾಗ್ದಾಳಿ ನಡೆಸಿದ್ದಾರೆ. ಹಾಗೇ, ನಮ್ಮ ರಾಜ್ಯದವರಿಗೆ ರಕ್ಷಣೆ ನೀಡುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ. ನಮ್ಮ ಗಮನಕ್ಕೆ ತಾರದೆ ಹೇಗೆ ನೀವು ನಮ್ಮ ರಾಜ್ಯದ ಅಧಿಕಾರಿಗಳ ಮೇಲೆ ಮುತ್ತಿಗೆ ಹಾಕಿದಿರಿ? ಎಂದು ಪ್ರಶ್ನಿಸಿದ್ದಾರೆ.