ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರ ಅವರು, 'ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ನಂಬಿಕೆಯನ್ನು ಸುಳ್ಳು ಮಾಡುತ್ತಿದೆ. ಒಂದು ವೇಳೆ ನನಗೇನಾದರೂ ಆದರೆ ಪ್ರಧಾನಿ ನರೇಂದ್ರ ಮೋದಿಯೇ ಜವಾಬ್ದಾರಿ, ಜನ ಅವರನ್ನೇ ಕೇಳುತ್ತಾರೆ. ಜನ ನನ್ನನ್ನು ಪರಿಸ್ಥಿತಿಯನ್ನು ನಿಭಾಯಿಸಿದ ವ್ಯಕ್ತಿ ಎನ್ನುವ ದೃಷ್ಟಿಯಲ್ಲಿ ನೋಡುತ್ತಾರೆಯೇ ಹೊರತು, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದವನು ಎಂದು ಗುರುತಿಸುವುದಿಲ್ಲ. ಒಂದು ವೇಳೆ ನನಗೇನಾದರೂ ಆದರೆ, ಜನರು ಪ್ರಧಾನಿಯನ್ನು ಜವಾಬ್ದಾರನ್ನಾಗಿ ಮಾಡುತ್ತಾರೆ.'