ನಿನ್ನೆ ಘಟನೆ ನಡೆದ ನಂತರ ಪ್ರತಿಕ್ರಿಯೆ ನೀಡಿದ್ದ ಶ್ರೀವಾಸ್ತವ್, 'ಯಾವ ಸಮಯದಲ್ಲಿ ಬೇಕಾದರೂ ಇಲ್ಲಿನ ಸ್ಥಳೀಯ ಪೊಲೀಸರು ನನ್ನನ್ನು ಬಂಧಿಸಬಹುದು. ಮನೆಯ ಸುತ್ತ 40ಕ್ಕೂ ಹೆಚ್ಚು ಪೊಲೀಸರು ಸೇರಿದ್ದಾರೆ. ನನ್ನದೇ ಮನೆಯೊಳಗೆ ನಾನು ಖೈದಿಯಂತೆ ಬಂಧಿಸಲ್ಪಟ್ಟಿದ್ದೇನೆ. ನನ್ನ ಕುಟುಂಬದವರು ಗಾಬರಿಗೊಂಡಿದ್ದಾರೆ, ಮನೆಯಲ್ಲಿ ಚಿಕ್ಕ ಮಗಳು ಮತ್ತು ಹೆಂಡತಿ ಇದ್ದಾರೆ. ಅವರಿಗೆ ನನ್ನ ಸುರಕ್ಷತೆಯ ಬಗ್ಗೆ ಚಿಂತೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.