ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ದಾರುಣ ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಅಸ್ವಸ್ಥರಿಗೆ ತಕ್ಷಣವೇ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಸೂಚಿಸಿದ್ದಾರೆ. ಅಲ್ಲದೆ ಸಂತ್ರಸ್ತರ ರಕ್ತ ಸಂಬಂಧಿಗಳಿಗೆ ತಲಾ 2 ಲಕ್ಷ ರುಪಾಯಿಗಳು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರ ಸಂಬಂಧಿಗಳಿಗೆ ತಲಾ 50 ಸಾವಿರ ರುಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.