ಸತ್ಯಕ್ಕೆ ಯಾವಾಗಲೂ ಜಯವಿದೆ; ರಾಬರ್ಟ್ ವಾದ್ರಾ

ವಿದೇಶದಲ್ಲಿ ಆಸ್ತಿ ಖರೀದಿಗೆ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಆರೋಪ ಎದುರಿಸುತ್ತಿರುವ ಸೋನಿಯಾ ...
ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ

ನವದೆಹಲಿ: ವಿದೇಶದಲ್ಲಿ ಆಸ್ತಿ ಖರೀದಿಗೆ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಈಗಾಗಲೇ ಜಾರಿ ನಿರ್ದೇಶನಾಲಯದಿಂದ ಮೂರು ಬಾರಿ ವಿಚಾರಣೆ ಎದುರಿಸಿದ್ದು ಭಾನುವಾರ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸತ್ಯಕ್ಕೆ ಯಾವಾಗಲೂ ಜಯ ಸಿಗುತ್ತದೆ ಎಂದು ಹೇಳಿದ್ದಾರೆ. ಈ ಹೊತ್ತಿನಲ್ಲಿ ನನ್ನ ಜೊತೆಗಿರುವ ಮತ್ತು ನನ್ನ ಬೆಂಬಲಕ್ಕೆ ನಿಂತಿರುವ ಕುಟುಂಬದವರು, ಸ್ನೇಹಿತರು, ಬಂಧುಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ಚೆನ್ನಾಗಿದ್ದೇನೆ. ಯಾವ ಪರಿಸ್ಥಿತಿಯನ್ನು ಕೂಡ ನಿಭಾಯಿಸುವ ಶಕ್ತಿ ನನಗೆ ಸಿಕ್ಕಿದೆ. ಸತ್ಯಕ್ಕೆ ಯಾವಾಗಲೂ ಜಯ ಸಿಗುತ್ತದೆ ಎಂದು ನಂಬಿದ್ದೇನೆ. ಎಲ್ಲರಿಗೂ ಶುಭವಾರ ಎಂದು ಬರೆದುಕೊಂಡಿದ್ದಾರೆ.

ನಿನ್ನೆ ವಿಚಾರಣೆಗೆ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗಿದ್ದ ವೇಳೆ ಸುಮಾರು 8 ಗಂಟೆಗಳ ಕಾಲ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದರು. ಕಳೆದ 10 ದಿನಗಳಲ್ಲಿ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಫೆಬ್ರವರಿ 16ರವರೆಗೆ ಪಟಿಯಾಲಾ ಹೌಸ್ ನ್ಯಾಯಾಲಯ ರಾಬರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com