ಸತ್ಯಾಗ್ರಹಕ್ಕೂ ಮೊದಲು ಸಿಎಂ ನಾಯ್ಡು ಮಹಾತ್ಮ ಗಾಂಧಿ ಸಮಾಧಿ ರಾಜ್ ಘಾಟ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು. ಬಳಿಕ ಆಂಧ್ರ ಪ್ರದೇಶ ಭವನಕ್ಕೆ ತೆರಳಿ ತಮ್ಮ ಧರ್ಮ ಪೋರಾಟ ದೀಕ್ಷಾ ಸತ್ಯಾಗ್ರಹವನ್ನು ಆರಂಭಿಸಿದರು. ಇನ್ನು ನಾಯ್ಡು ಅವರ ಪ್ರತಿಭಟನೆಗೆ ಇಂದು ವಿಪಕ್ಷಗಳ ಪ್ರಮುಖ ಮುಖಂಡರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಇಂದಿನ ಸತ್ಯಾಗ್ರಹದಲ್ಲಿ ಆಂಧ್ರ ಪ್ರದೇಶದ ಸಚಿವರು, ಟಿಡಿಪಿ ಶಾಸಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.