ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಗ್ರೆನೇಡ್ ದಾಳಿಗೆ ಯೋಧರು ಸೇರಿ 11 ಮಂದಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಶ್ರೀನಗರದಲ್ಲಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 7 ಮಂದಿ ಸೈನಿಕರೂ ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಶ್ರೀನಗರದಲ್ಲಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 7 ಮಂದಿ ಸೈನಿಕರೂ ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ.
ಶ್ರೀನಗರದ ಜನನಿಭಿಡ ಲಾಲ್ ಚೌಕ್ ನ ಪಲ್ಲಾಡಿಯಂ ಸಿನೆಮಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ಸುಮಾರು 6.45 ರ ವೇಳೆಯಲ್ಲಿ ಉಗ್ರರು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಪರಿಣಾಮ ಘಟನೆಯಲ್ಲಿ 7 ಸೈನಿಕರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರು ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಸಮೀಪದ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com