2002ರಲ್ಲೇ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಗುಜರಾತ್ ನಲ್ಲಿ ರಾಜಧರ್ಮ ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಇದೀಗ ಮತ್ತದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರಧಾನಿ ಹುದ್ದೆಯಲ್ಲಿದ್ದಾರೆ. ಈಗಲೂ ಅದೇ ಛಾಳಿ ಮುಂದುವರೆಸಿದ್ದು, ರಾಜಧರ್ಮ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು. ಅಂತೆಯೇ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಮ್ಮ ಹಕ್ಕು ಅದನ್ನು ಸಾಧಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ನೀವು ನೀಡದಿದ್ದರೆ ಅದನ್ನು ಹೇಗೆ ಸಾಧಿಸಬೇಕು ಎಂಬುದು ನಮಗೆ ಗೊತ್ತು ಎಂದು ಹೇಳಿದರು.