ಇಂದು ದೆಹಲಿಯಲ್ಲಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಒಂದು ದಿನದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಆಂಧ್ರ ಪ್ರದೇಶ ಜನರ ದುಡ್ಡನ್ನು ಕೊಳ್ಳೆ ಹೊಡೆದು ಪ್ರಧಾನಿ ಮೋದಿ ಅನಿಲ್ ಅಂಬಾನಿ ಕೈಗೆ ನೀಡಿದ್ದಾರೆ. ರಫೇಲ್ ಒಪ್ಪಂದದ ಮೂಲಕ ಅನಿಲ್ ಅಂಬಾನಿ ಲೂಟಿಗೆ ಪ್ರಧಾನಿ ಮೋದಿ ಅವರೇ ಬಾಗಿಲು ತೆರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.