ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಮುಖಂಡನ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಸಮಾಜವಾದಿ ಮುಖಂಡ ಅಖಿಲೇಶ್ ಯಾದವ್ ತೆರಳಿಚ್ಛಿಸಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಪೊಲೀಸರು ಅವರನ್ನು ತಡೆದಿದ್ದರು. ಈ ವಿಚಾರ ಇದೀಗ ಉತ್ತರ ಪ್ರದೇಶ ಮಾತ್ರವಲ್ಲದೇ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗುತ್ತಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯಾನಾಥ್ ಅವರು, 'ಸಾಮಾಜವಾದಿ ಪಕ್ಷ ಹಿಂಸಾಚಾರ ಸೃಷ್ಟಿಯಿಂದಲೇ ಕುಖ್ಯಾತಿ ಗಳಿಸಿದೆ. ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಗಳನ್ನು ತಾವು ಸಹಿಸುವುದಿಲ್ಲ. ಈ ಕುರಿತು ಎಸ್ ಪಿ ಪಕ್ಷ ಕೊಂಚ ಜಾಗರೂಕತೆಯಿಂದರಬೇಕು, ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ನಡೆಯುತ್ತಿದ್ದು, ಸಮಾಜ ವಿದ್ರೋಹಿ ಚಟುವಟಿಕೆಗಳಿಗೆ ನಾವು ಆಸ್ಪದ ನೀಡುವುದಿಲ್ಲ ಎಂದು ಹೇಳಿದರು.