ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು, ರಾಷ್ಟ್ರೀಯ ಪ್ರಶಸ್ತಿಗಳಾದ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮ ಶ್ರೀ ಗೌರವಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಪ್ರಶಸ್ತಿ ಪುರಸ್ಕೃತರ ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ ಎಂದು ಹೇಳಿದರು.