ಅಹಮದಾಬಾದ್: ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಮುಂಬರುವ ಲೋಕಸಭಾ ಚುನಾವಣೆ ಪ್ರಮುಖವಾದ ಹಂತವಾಗಿದ್ದು, ನರೇಂದ್ರ ಮೋದಿ ಅವರಿಗೆ ಜನತೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ,ರಾಜ್ಯಮಟ್ಟದ ನಾಯಕರೊಂದಿಗೆ ಮಹಾಮೈತ್ರಿ ಮಾಡಿಕೊಳ್ಳಲಾಗುತ್ತಿದೆ.ಇದರಿಂದ ಬಿಜೆಪಿಯ ಚುನಾವಣಾ ಆಶೋತ್ತರಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
ಪ್ರತಿಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಹಾಗೂ ಮಹಾಮೈತ್ರಿಯ ನಾಯಕರು ಯಾರು ಎಂಬುದನ್ನು ತಿಳಿಯಲು ಬಯಸುವುದಾಗಿ ಹೇಳಿದರು.
ಗುಜರಾತಿನಲ್ಲಿ 'ಮೇರಾ ಪರಿವಾರ್ ಬಾಜಪ ಪರಿವಾರ್ ' ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಬಹುಮತದ ಸರ್ಕಾರದ ಅಗತ್ಯವಾಗಿದೆ ಎಂದರು.
Advertisement