ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಈ ಎರಡು ವಿಧೇಯಕಗಳನ್ನು ಮಂಡಿಸುತ್ತಿದೆ ಎನ್ನಲಾಗಿತ್ತು. ಆದರೆ ಸಂಖ್ಯಾಬಲದ ಕೊರತೆಯಿರುವ ಹಿನ್ನಲೆಯಲ್ಲಿ ಮೋದಿ ಸರ್ಕಾರ ಕೊನೆ ಕ್ಷಣದಲ್ಲಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ. ಆದರೆ ಲೋಕಸಭೆಯ ಅಂಗೀಕಾರ ಪಡೆದಿರುವ ಈ ಎರಡು ವಿಧೇಯಕಗಳಿಗೆ ಜೂನ್ 3ರೊಳಗೆ ರಾಜ್ಯಸಭೆಯ ಅಂಗೀಕಾರ ಪಡೆಯಬೇಕಿದೆ. ಇಲ್ಲದಿದ್ದಲೆ ಪೌರತ್ವ ಮತ್ತು ತ್ರಿವಳಿ ತಲಾಖ್ ಮಸೂದೆ ಮಾನ್ಯತೆ ಕಳೆದುಕೊಳ್ಳಲಿವೆ.