ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೇ ಪ್ರಧಾನಿಯಾಗದಂತೆ ತಡೆಯೊಡ್ಡಳು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಎಸ್ಪಿ ನಾಯಕಿ ಮಯಾವತಿ ಜತೆ ಸೇರಿ ಮಹಾಘಟಬಂಧನ್ ರಚಿಸಿದ್ದರೆ ಇತ್ತ ಅಖಿಲೇಶ್ ಯಾದವ್ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಮಾತ್ರ 2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿಯಾಗಲಿ ಆ ತಾಕತ್ತು ಇರುವುದು ಅವರೊಬ್ಬರಿಗೆ ಎಂದು ಸಂಸತ್ ಸದನದಲ್ಲಿ ಹೇಳಿದ್ದಾರೆ.