ಈ ಹಿಂದೆ ಸರ್ಕಾರದ ಹಲವು ನಿರ್ಣಯಗಳನ್ನು ಬಹಿರಂಗವಾಗಿಯೇ ಟೀಕಿಸಿದ್ದ ಕಿರಣ್ ಬೇಡಿ ಅವರು, ಹೆಲ್ಮೆಟ್ ಕಡ್ಡಾಯವೂ ಸೇರಿದಂತೆ ಸರ್ಕಾರದ ಹಲವು ನಿರ್ಣಯಗಳು ಸರಿಯಾಗಿ ಜಾರಿಯಾಗಿಲ್ಲ ಎಂದು ಕಿಡಿಕಾರಿದ್ದರು. ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದ ಸಿಎಂ ನಾರಾಯಣಸ್ವಾಮಿ ರಾಜ್ಯದಲ್ಲಿ ಹೆಲ್ಮೆಟ್ ಕಡ್ಡಾಯ ಜಾರಿಗೆ ತಾವು ಈಗಲೂ ಬದ್ಧ. ಆದರೆ ಇದು ಪೊಲೀಸ್ ನಿರ್ದೇಶಕರಿಗೆ ಸಂಬಂಧಿಸಿದ ವಿಚಾರವಾಗಿದ್ದು, ಹೆಲ್ಮೆಟ್ ಕಡ್ಡಾಯ ಜಾರಿಗೆ ಸಾಕಷ್ಟು ಸಮಸ್ಯೆಗಳಿವೆ. ಅವುಗಳೆಲ್ಲವನ್ನೂ ನಿವಾರಿಸಿಕೊಂಡು ಹಂತಹಂತವಾಗಿ ಪೂರ್ಣ ಮಟ್ಟದಲ್ಲಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದರು.