ನವದೆಹಲಿ: ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ತುರ್ತು ಸಭೆಯ ಬಳಿಕ ಹಣಕಾಸು ಸಚಿವ ಅರುಣ್ ಜೇಟ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಅವರ ಕುಟುಂಬಗಳಿಗೆ ತಮ್ಮ ಸಂತಾಪವನ್ನು ತಿಳಿಸಿದ ಜೇಟ್ಲಿ ಭಾರತ ಈ ಹಿಂದೆ ಪಾಕಿಸ್ತಾನಕ್ಕೆ ನೀಡಿದ್ದ ವಿಶೇಷ ಆಪ್ತ ರಾಷ್ಟ್ರ(Most Favoured Nation status) ಸ್ಥಾನಮಾನವನ್ನು ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ.