ಜಮ್ಮು-ಕಾಶ್ಮೀರ: ಪುಲ್ವಾಮ ದಾಳಿಯಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರವಿದ್ದ ಪೆಟ್ಟಿಗೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಬುದ್ ಗಾಂನಲ್ಲಿಂದು ಹೆಗಲು ನೀಡಿದರು.
ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಮತ್ತು ಸೇನಾ ಉತ್ತರ ವಲಯದ ಕಮಾಂಡ್ ಚೀಪ್ ಲೆಪ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಕೂಡಾ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿದರು.
ಹುತಾತ್ಮರಾಧ 41 ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರರಕ್ಕೆ ಶ್ರದ್ದಾಂಜಲಿ ಸಲ್ಲಿಸಿದ ನಂತರ ಅವರ ಸ್ವಗ್ರಾಮಕ್ಕೆ ರವಾನಿಸಲಾಯಿತು.
ಶ್ರದಾಂಜಲಿ ಸಲ್ಲಿಸುವ ವೇಳೆ ಸಿಆರ್ ಪಿಎಫ್ ಶಿಬಿರದ ಬಳಿ ವೀರ ಜವಾನ್ ಅಮರ್ ರಹೇ ಎಂಬ ಘೋಷಣೆಗಳು ಮುಗಿಲುಮುಟ್ಟಿತು. ಇದಕ್ಕೂ ಮುನ್ನ ಶವಪೆಟ್ಟಿಗೆ ತ್ರಿವರ್ಣ ಧ್ವಜ ಹೂದಿಸುವ ಮೂಲಕ ಗೌರವ ಸಲ್ಲಿಸಲಾಯಿತು.
Advertisement