'ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ, ಯೋಧರ ಸಹಾಯಕ್ಕೆ ಟ್ರಕ್ ಓಡಿಸುವ ಶಕ್ತಿ ನನಗಿದೆ'

ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ...
ಅಣ್ಣಾ ಹಜಾರೆ
ಅಣ್ಣಾ ಹಜಾರೆ
ಮುಂಬಯಿ: ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಕೈಗೊಂಡು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ  ಅಣ್ಣ ಹಜಾರೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ವಯಸ್ಸಾಗಿದೆ, ಹೀಗಾಗಿ ಗನ್ ಹಿಡಿಯಲು ನನಗೆ ಸಾಧ್ಯವಿಲ್ಲ, ಆದರೆ ಅವಶ್ಯಕತೆ ಬಿದ್ದರೇ ನನ್ನ ದೇಶಕ್ಕಾಗಿ ಹೋರಾಡುವ ಸೈನಿಕರಿಗಾಗಿ ಸ್ಟೀರಿಂಗ್ ಹಿಡಿಯುವೆ ಎಂದು ಹೇಳಿದ್ದಾರೆ. 
ಕಳೆದ ಫೆಬ್ರವರಿ 5 ರಿಂದ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com