ನವದೆಹಲಿ:ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಕಾಶ್ಮೀರದ ಯುವಕರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೋಮು ಸೌಹಾರ್ದತೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ತಮ್ಮದೇ ಆದ ರಾಜಕೀಯ ಪಕ್ಷದವರೂ ಈ ರೀತಿಯಲ್ಲಿ ತೊಡಗಿಸಿಕೊಂಡಿದ್ದರೂ ಕೂಡಾ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ ಎನ್ನಲಾಗಿದೆ.
Advertisement