ನವದೆಹಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಇತ್ತೀಚೆಗೆ ವಿವಾದಾತ್ಮಕವಾಗಿ ಪ್ರತಿಕ್ರಯಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನನವಜೋತ್ ಸಿಂಗ್ ಸಿಧು ಮತ್ತೆ ತಮ್ಮ "ಹೇಳಿಕೆ" ಮೂಲಕವೇ ಸುದ್ದಿಯಾಗಿದ್ದಾರೆ. 1999 ರ ಕಂದಹಾರ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಸಿಧು "ಜೆಇಎಂ ಮುಖ್ಯಸ್ಥ ಮಸೂದ್ ಅಝರ್ ನನ್ನು 1999ರಲ್ಲಿ ಬಿಡುಗಡೆಗೊಳಿಸಿದವರು ಯಾರು ಎಂದು ನಾನು ತಿಳಿಯಬಯಸುತ್ತೇನೆ" ಎಂದಿದ್ದಾರೆ.