ಪಿಂಗ್ಲಾದಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣ: 3 ಉಗ್ರರ ಹತ್ಯೆ, 3 ಯೋಧರು ಹುತಾತ್ಮ

ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಪುಲ್ವಾಮದ ಪಿಂಗ್ಲಾದಲ್ಲಿ ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣಗೊಂಡಿದ್ದು ಜೈಶ್ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 3....
ಪಿಂಗ್ಲಾದಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣ: 3 ಉಗ್ರರ ಹತ್ಯೆ, 3 ಯೋಧರು ಹುತಾತ್ಮ
ಪಿಂಗ್ಲಾದಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ಪೂರ್ಣ: 3 ಉಗ್ರರ ಹತ್ಯೆ, 3 ಯೋಧರು ಹುತಾತ್ಮ
ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಪುಲ್ವಾಮದ ಪಿಂಗ್ಲಾದಲ್ಲಿ ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆ  ಪೂರ್ಣಗೊಂಡಿದ್ದು ಜೈಶ್ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 3 ಉಗ್ರರನ್ನು ಹತ್ಯೆ ಮಾಡಲಾಗಿದೆ. 
ಸುಮಾರು 12 ಗಂಟೆಗಳಿಗೂ ಹೆಚ್ಚು ನಡೆದ ಕಾರ್ಯಾಚರಣೆ ವೇಳೆ 3 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಯೋಧರು ಹುತಾತ್ಮರಾಗಿರುವುದರ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ನೀಡಿದ್ದು, ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್, ಹವಾಲ್ದಾರ್ ಶಿಯೋರಾಮ್, ಸಿಪಾಯಿ ಅಜಯ್ ಕುಮಾರ್ ಹುತಾತ್ಮರಾಗಿದ್ದಾರೆ. 
ಯೋಧರು ಹುತಾತ್ಮರಾಗಿರುವುದರ ಬಗ್ಗೆ ಭಾರತೀಯ ಸೇನೆಯ ಉತ್ತರ ಕಮಾಂಡ್ ನ ಟ್ವೀಟ್ ಖಾತೆಯ ಮೂಲಕ ಸೇನೆ ಶ್ರದ್ಧಾಂಜಲಿ ಸಲ್ಲಿಸಲಾಗಿದ್ದು, "ಯೋಧರ ಶ್ರೇಷ್ಟ ತ್ಯಾಗ ಬಲಿದಾನಗಳಿಗೆ ನಮನ ಸಲ್ಲಿಸುತ್ತೇವೆ. ಯೋಧರ ಸಾವಿಗೆ ಸಂತಾಪ ಸೂಚಿಸುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ. 
ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಜೈ-ಇ-ಮೊಹಮ್ಮದ್ ನ ಉಗ್ರ, ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರಶೀದ್ ಘಾಜಿ ಅಲಿಯಾಸ್ ಕಮ್ರಾನ್ ನ್ನು ಹೊಡೆದುರುಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com